Posts

Showing posts from April, 2010

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ಚಿತ್ರ: ಜಿಮ್ಮಿಗಲ್ಲು ಗೀತರಚನೆ: ಚಿ.ಉದಯಶಂಕರ್ ಸಂಗೀತ: ವಿಜಯಭಾಸ್ಕರ ಹಿನ್ನಲೆ ಗಾಯನ:ವಿಷ್ಣುವರ್ಧನ್ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ ಅಂಗೈಯಗಲ ಜಾಗ ಸಾಕು ಹಾಯಾಗಿರೋಕೆ ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು ಒಂದು ಅಲ್ಲೇ ನನ್ನ ಹೋಗು ಅಂದರೇನು ಸ್ವರ್ಗದಂತಾ ಊರು ನನ್ನ ಹತ್ತಿರ ಕರೆದಾಯ್ತು ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ... ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ ಕಷ್ಟಾ ಒಂದೇ ಬರದು ಸುಖವೂ ಬರದೇ ಇರದು ರಾತ್ರೀ ಮುಗಿದಾ ಮೇಲೇ ಹಗಲು ಬಂದೇ ಬತ್ತೈತೆ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ... ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ ದೇವ್ರು ತಾನೇ ನಂಗೆ ಅಪ್ಪ ಅಮ್ಮ ಎಲ್ಲಾ ಸಾಯೋ ತನಕಾ ನಂಬಿದವರ ಕೈ ಬಿಡಾಕಿಲ್ಲ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

ಆಕಾಶ ದೀಪವು ನೀನು

ಚಿತ್ರ: ಪಾವನ ಗಂಗಾ ಸಾಹಿತ್ಯ: ಚಿ.ಉದಯಶಂಕರ್ ಸಂಗೀತ: ರಾಜನ್-ನಾಗೇಂದ್ರ ಹಿನ್ನಲೆ ಗಾಯನ : ಎಸ್.ಜಾನಕಿ ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ ಆನಂದ ತುಂಬಲು ನೀನು ನಾ ನಲಿವೆನು ಆಕಾಶ ದೀಪವು ನೀನು... ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ ಹೃದಯವು ಧರಿಸಿದೆ ಈ ಜೀವ ಸೋಲುತಿದೆ ಸಂಗಾತಿ ಆದರೆ ನೀನು ನಾ ಉಳಿವೆನು ಆಕಾಶ ದೀಪವು ನೀನು... ಹೂವಾದ ಆಸೆಯೆಲ್ಲ ಮುಳ್ಳಾಗಿ ಹೋಯಿತಲ್ಲ ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ ನೆಮ್ಮದಿಯ ಕಾಣೆನು ನಾ ಸೋತೆನು ಆಕಾಶ ದೀಪವು ನೀನು...